ಗುಂಡ್ಲುಪೇಟೆ: ‘ಸರ್ಕಾರಿ ಕಚೇರಿಗಳಲ್ಲಿ ಜಗಜ್ಯೋತಿ ಬಸವಣ್ಣನವರ ಭಾವಚಿತ್ರ ಅಳವಡಿಸುವ ಸಂಬಂಧ ಸುತ್ತೋಲೆ ಹೊರಡಿಸಲು ಸೂಚಿಸಿದ್ದೇನೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಇಲ್ಲಿನ ಮಹದೇವ ಪ್ರಸಾದ್ ನಗರದಲ್ಲಿ ಬುಧವಾರ ನಡೆದ ಮತದಾರರಿಗೆ ಕೃತಜ್ಞತಾ ಸಮರ್ಪಣಾ ಸಲ್ಲಿಕೆ ಸಮಾವೇಶದಲ್ಲಿ ಅವರು ಮಾತನಾಡಿದರು.
ನಿನ್ನೆಯಷ್ಟೆ ಮಹಾರಾಷ್ಟ್ರ ಸರ್ಕಾರವು ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣನ ಭಾವಚಿತ್ರ ಅಳವಡಿಸುವ ಸಂಬಂಧ ಆದೇಶ ಹೊರಡಿಸಿತ್ತು. ಇದರಿಂದ ಬಸವಣ್ಣನ ತವರು ರಾಜ್ಯವಾದ ಕರ್ನಾಟಕದಲ್ಲೂ ಇಂಥ ಕ್ರಮಕೈಗೊಳ್ಳಬೇಕು ಎಂಬ ಕೂಗು ವಿವಿಧ ಸ್ತರಗಳಿಂದ ಕೇಳಿ ಬಂದಿತ್ತು.
12ನೇ ಶತಮಾನದಲ್ಲಿ ಪ್ರಜಾತಂತ್ರ ವ್ಯವಸ್ಥೆಯನ್ನು ಜಾರಿಗೊಳಿಸುವ ಮೂಲಕ ಮಹತ್ತರ ಹೆಜ್ಜೆ ಇಟ್ಟಿದ್ದ ಬಸವಣ್ಣ, ಅನುಭವ ಮಂಟದ ಮೂಲಕ ಎಲ್ಲ ಸಮುದಾಯವರಿಗೂ ಸಮಾನ ಅವಕಾಶ ನೀಡುವ ನಿಯಮ ಜಾರಿಗೆ ತಂದಿದ್ದರು. ತಮ್ಮ ಕ್ರಾಂತಿಕಾರಿ ನಡೆಗಳ ಮೂಲಕ ಸಮಾಜದಲ್ಲಿನ ಅಸಮಾನತೆ, ಜಾತಿ ಪದ್ಧತಿ, ಮೌಢ್ಯದ ವಿರುದ್ಧ ಹೋರಾಟ ನಡೆಸಿದ್ದರು.
No comments:
Post a Comment