Tuesday, May 16, 2017

ಪ್ರಚಲಿತ ವಿದ್ಯಮಾನ : 16 ಮೇ 2017 : ‘ತ್ರಿವಳಿ ತಲಾಖ್ ಕುರಿತ ನಂಬಿಕೆ ರಾಮನ ಹುಟ್ಟಿನ ಬಗೆಗಿನ ಹಿಂದೂಗಳ ನಂಬಿಕೆಗೆ ಸಮ’

ತ್ರಿವಳಿ ತಲಾಖ್‌ ನಂಬಿಕೆಗೆ ಸಂಬಂಧಿಸಿದ ವಿಷಯ. ಭಗವಾನ್ ರಾಮ ಅಯೋಧ್ಯೆಯಲ್ಲಿ ಜನಿಸಿದ್ದಾನೆ ಎಂಬ ಹಿಂದೂಗಳ ನಂಬಿಕೆಗೆ ಸಮನಾದದ್ದು ಎಂದು ಸುಪ್ರೀಂ ಕೋರ್ಟ್‌ಗೆ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ತಿಳಿಸಿದೆ.

ನವದೆಹಲಿ: ತ್ರಿವಳಿ ತಲಾಖ್‌ ನಂಬಿಕೆಗೆ ಸಂಬಂಧಿಸಿದ ವಿಷಯ. ಭಗವಾನ್ ರಾಮ ಅಯೋಧ್ಯೆಯಲ್ಲಿ ಜನಿಸಿದ್ದಾನೆ ಎಂಬ ಹಿಂದೂಗಳ ನಂಬಿಕೆಗೆ ಸಮನಾದದ್ದು ಎಂದು ಸುಪ್ರೀಂ ಕೋರ್ಟ್‌ಗೆ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ (ಎಐಎಂಪಿಎಲ್‌ಬಿ) ತಿಳಿಸಿದೆ.

ತ್ರಿವಳಿ ತಲಾಖ್ ಅನ್ನು ಮುಸ್ಲಿಂ ಸಮುದಾಯವು ಕಳೆದ 1,400 ವರ್ಷಗಳಿಂದಲೂ ಆಚರಿಸುತ್ತಾ ಬಂದಿದೆ. ಇದು ನಂಬಿಕೆಗೆ ಸಂಬಂಧಿಸಿದ ವಿಷಯ. ಹೀಗಾಗಿ ಸಾಂವಿಧಾನಿಕ ನೈತಿಕತೆ ಮತ್ತು ಸಮಾನತೆಯ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಮಂಡಳಿ ಹೇಳಿದೆ.

‘ತ್ರಿವಳಿ ತಲಾಖ್ ಅನ್ನು ಸಾವಿರಾರು ವರ್ಷಗಳಿಂದ ಆಚರಿಸುತ್ತಾ ಬರಲಾಗುತ್ತಿದೆ. ಅದು ಇಸ್ಲಾಮಿಕ್‌ಗೆ ವಿರುದ್ಧವಾದದ್ದು ಎನ್ನಲು ನಾವು ಯಾರು?’ ಎಂದು ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಪರ ವಕೀಲ ಕಪಿಲ್ ಸಿಬಲ್ ವಾದ ಮಂಡಿಸಿದ್ದಾರೆ.

ತ್ರಿವಳಿ ತಲಾಖ್ ಅನ್ನು ಸುಪ್ರೀಂ ಕೋರ್ಟ್ ರದ್ದು ಮಾಡಿದಲ್ಲಿ ಮುಸ್ಲಿಮರ ವಿವಾಹ ಮತ್ತು ವಿಚ್ಛೇದನಕ್ಕೆ ಸಂಬಂಧಿಸಿ ಹೊಸ ಕಾನೂನು ರಚಿಸಲು ಸಿದ್ಧವಿರುವುದಾಗಿ ಕೇಂದ್ರ ಸರ್ಕಾರ ಸೋಮವಾರ ತಿಳಿಸಿತ್ತು.

No comments:

Post a Comment

Kannada GK You Tube Channel

🎞 *ಕನ್ನಡ ಜ್ಞಾನ ಭಂಡಾರ - Kannada Jnana Bhandara* 🎥📚 YouTube Channel ಕನ್ನಡ ಸಾಮಾನ್ಯ ಜ್ಞಾನ ಮತ್ತು ಪ್ರಚಲಿತ ವಿದ್ಯಮಾನದ ವೀಡಿಯೋಗಳಿಗಾಗಿ ನಮ್ಮ ಯೂ ಟ್...