ಬೆಂಗಳೂರು: ಎಸ್ಎಸ್ಎಲ್ಸಿಯಲ್ಲಿ ತೇರ್ಗಡೆ ಹೊಂದಿ ಪಿಯುಸಿ ಪ್ರವೇಶಕ್ಕೆ ವಿದ್ಯಾರ್ಥಿಗಳು ಆಧಾರ್ ಕಾರ್ಡ್ ಪಡೆಯುವುದಿನ್ನು ಕಡ್ಡಾಯ. ಕಾರ್ಡ್ ಇಲ್ಲದಿದ್ದರೆ ಅರ್ಜಿ ಸಲ್ಲಿಸಿ ರಶೀದಿ ಸಂಖ್ಯೆಯನ್ನಾದರೂ ಹೊಂದಬೇಕು.
ಈ ಕುರಿತು ಬಹುತೇಕ ಪಿಯು ಕಾಲೇಜುಗಳು ಸೂಚನಾ ಫಲಕಗಳಲ್ಲಿ ‘ಆಧಾರ್ ಕಡ್ಡಾಯ’ ಎಂದು ಪ್ರಕಟಿಸಿವೆ. ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶನದಂತೆ ಈ ಕ್ರಮಕ್ಕೆ ಕೈಗೊಳ್ಳಲಾಗಿದೆ.
ಪ್ರವೇಶಾತಿ ನಮೂನೆಯಲ್ಲಿ ಆಧಾರ್ ಕಾರ್ಡ್ ಸಂಖ್ಯೆ ನಮೂದಿಸುವಂತೆ ಸೂಚಿಸಲಾಗಿದ್ದು, ಅದಕ್ಕಾಗಿ ಹೊಸ ಕಾಲಂ ಕೂಡ ಸೇರ್ಪಡೆ ಮಾಡಲಾಗಿದೆ. ಅರ್ಜಿ ನಮೂನೆ ಜತೆಗೆ ಆಧಾರ್ ಕಾರ್ಡ್ ಸಲ್ಲಿಸದ ವಿದ್ಯಾರ್ಥಿಗಳಿಗೆ ಪ್ರವೇಶ ನಿರಾಕರಿಸಿರುವ ಪ್ರಕರಣಗಳು ಬೆಳಕಿಗೆ ಬಂದಿದ್ದು, ಆಧಾರ್ ಕಾರ್ಡ್ ಪಡೆಯಲು ಅರ್ಜಿ ಸಲ್ಲಿಸುವಂತೆ ಸೂಚಿಸಿವೆ. ಸಲ್ಲಿಸಿದ ಅರ್ಜಿಯ ರಶೀದಿ ಸಂಖ್ಯೆ ನೀಡಿದರೆ ಪ್ರವೇಶಾತಿಗೆ ಅವಕಾಶ ನೀಡುವುದಾಗಿ ತಿಳಿಸಿವೆ. ಆದರೆ, ಕೆಲವು ಕಾಲೇಜುಗಳಲ್ಲಿ ಜನ್ಮದಿನಾಂಕ, ವಿಳಾಸ ಸೇರಿ ಇತರ ವಿವರ ದೃಢೀಕರಿಸುವ ಯಾವುದಾದರೂ ದಾಖಲೆಗಳನ್ನು ಸಲ್ಲಿಸಬಹುದು ಎಂದು ಹೇಳುತ್ತಿವೆ.
ವಿದ್ಯಾರ್ಥಿಯ ಸಮಗ್ರ ಶೈಕ್ಷಣಿಕ ಸಾಧನೆ ಒಂದೆಡೆಗೆ ತರುವ ಉದ್ದೇಶದಿಂದ ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನ ಆಧಾರ್ ಸಲ್ಲಿಸಲು ತಿಳಿಸಿದೆ ಎಂದು ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಈ ಕುರಿತು ಬಹುತೇಕ ಪಿಯು ಕಾಲೇಜುಗಳು ಸೂಚನಾ ಫಲಕಗಳಲ್ಲಿ ‘ಆಧಾರ್ ಕಡ್ಡಾಯ’ ಎಂದು ಪ್ರಕಟಿಸಿವೆ. ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶನದಂತೆ ಈ ಕ್ರಮಕ್ಕೆ ಕೈಗೊಳ್ಳಲಾಗಿದೆ.
ಪ್ರವೇಶಾತಿ ನಮೂನೆಯಲ್ಲಿ ಆಧಾರ್ ಕಾರ್ಡ್ ಸಂಖ್ಯೆ ನಮೂದಿಸುವಂತೆ ಸೂಚಿಸಲಾಗಿದ್ದು, ಅದಕ್ಕಾಗಿ ಹೊಸ ಕಾಲಂ ಕೂಡ ಸೇರ್ಪಡೆ ಮಾಡಲಾಗಿದೆ. ಅರ್ಜಿ ನಮೂನೆ ಜತೆಗೆ ಆಧಾರ್ ಕಾರ್ಡ್ ಸಲ್ಲಿಸದ ವಿದ್ಯಾರ್ಥಿಗಳಿಗೆ ಪ್ರವೇಶ ನಿರಾಕರಿಸಿರುವ ಪ್ರಕರಣಗಳು ಬೆಳಕಿಗೆ ಬಂದಿದ್ದು, ಆಧಾರ್ ಕಾರ್ಡ್ ಪಡೆಯಲು ಅರ್ಜಿ ಸಲ್ಲಿಸುವಂತೆ ಸೂಚಿಸಿವೆ. ಸಲ್ಲಿಸಿದ ಅರ್ಜಿಯ ರಶೀದಿ ಸಂಖ್ಯೆ ನೀಡಿದರೆ ಪ್ರವೇಶಾತಿಗೆ ಅವಕಾಶ ನೀಡುವುದಾಗಿ ತಿಳಿಸಿವೆ. ಆದರೆ, ಕೆಲವು ಕಾಲೇಜುಗಳಲ್ಲಿ ಜನ್ಮದಿನಾಂಕ, ವಿಳಾಸ ಸೇರಿ ಇತರ ವಿವರ ದೃಢೀಕರಿಸುವ ಯಾವುದಾದರೂ ದಾಖಲೆಗಳನ್ನು ಸಲ್ಲಿಸಬಹುದು ಎಂದು ಹೇಳುತ್ತಿವೆ.
ವಿದ್ಯಾರ್ಥಿಯ ಸಮಗ್ರ ಶೈಕ್ಷಣಿಕ ಸಾಧನೆ ಒಂದೆಡೆಗೆ ತರುವ ಉದ್ದೇಶದಿಂದ ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನ ಆಧಾರ್ ಸಲ್ಲಿಸಲು ತಿಳಿಸಿದೆ ಎಂದು ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
No comments:
Post a Comment