ನವದೆಹಲಿ: ”ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ”ಯನ್ನು ಚಾಲ್ತಿಗೆ ತರುವ ಮೂಲಕ ಜ್ಯುಡಿಷಿಯಲ್ ಆ್ಯಕ್ಟಿವಿಸಂಗೆ ನಾಂದಿ ಹಾಡಿದ್ದ ಸುಪ್ರೀಂಕೋರ್ಟ್ನ ಮುಖ್ಯ ನ್ಯಾಯಮೂರ್ತಿ (ನಿವೃತ್ತ) ಪಿ ಎನ್ ಭಗವತಿ ಅವರು ಗುರುವಾರ ನಿಧನರಾಗಿದ್ದಾರೆ.
95 ವರ್ಷದ ಭಗವತಿ ಅವರು ಪತ್ನಿ ಪ್ರಭಾವತಿ ಮತ್ತು ಮೂವರು ಪತ್ರಿಯರನ್ನು ಅಗಲಿದ್ದಾರೆ. ಜಸ್ಟೀಸ್ ಭಗವತಿ ಅವರ ಅಂತ್ಯಕ್ರಿಯೆ ಶನಿವಾರ ನೆರವೇರಲಿದೆ. ರಾಷ್ಟ್ರಪತಿ, ಪ್ರಧಾನಿ ಸೇರಿದಂತೆ ಅನೇಕ ಗಣ್ಯರು ಭಗವತಿ ಸಾವಿಗೆ ಕಂಬನಿ ಮಿಡಿದಿದ್ದಾರೆ.
ಭಾರತದ 17 ನೇ ಮುಖ್ಯ ನ್ಯಾಯಮೂರ್ತಿಯಾಗಿದ್ದ ಜಸ್ಟೀಸ್ ಭಗವತಿ ಅವರು PIL ಭಗವತಿ ಎಂದೇ ಜನಮಾನಸದಲ್ಲಿ ಚಾಲ್ತಿಯಲ್ಲಿದ್ದರು. ಏಕೆಂದರೆ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು ಮೂಲಭೂತ ಹಕ್ಕನ್ನಾಗಿ ನ್ಯಾಯಾಂಗ ವ್ಯವಸ್ಥೆಯಲ್ಲಿ ಜಾರಿಗೆ ತಂದಿದ್ದೇ ಅವರು. ಕೈದಿಗಳೂ ಸಾಮಾನ್ಯ ಪ್ರಜೆಗಳಂತೆ ಮೂಲಭೂತ ಹಕ್ಕುಗಳನ್ನು ಚಲಾಯಿಸಬಹುದು ಎಂಬುದನ್ನು ಪ್ರತಿಪಾದಿಸಿದವರು ಜಸ್ಟೀಸ್ ಭಗವತಿ.
95 ವರ್ಷದ ಭಗವತಿ ಅವರು ಪತ್ನಿ ಪ್ರಭಾವತಿ ಮತ್ತು ಮೂವರು ಪತ್ರಿಯರನ್ನು ಅಗಲಿದ್ದಾರೆ. ಜಸ್ಟೀಸ್ ಭಗವತಿ ಅವರ ಅಂತ್ಯಕ್ರಿಯೆ ಶನಿವಾರ ನೆರವೇರಲಿದೆ. ರಾಷ್ಟ್ರಪತಿ, ಪ್ರಧಾನಿ ಸೇರಿದಂತೆ ಅನೇಕ ಗಣ್ಯರು ಭಗವತಿ ಸಾವಿಗೆ ಕಂಬನಿ ಮಿಡಿದಿದ್ದಾರೆ.
ಭಾರತದ 17 ನೇ ಮುಖ್ಯ ನ್ಯಾಯಮೂರ್ತಿಯಾಗಿದ್ದ ಜಸ್ಟೀಸ್ ಭಗವತಿ ಅವರು PIL ಭಗವತಿ ಎಂದೇ ಜನಮಾನಸದಲ್ಲಿ ಚಾಲ್ತಿಯಲ್ಲಿದ್ದರು. ಏಕೆಂದರೆ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು ಮೂಲಭೂತ ಹಕ್ಕನ್ನಾಗಿ ನ್ಯಾಯಾಂಗ ವ್ಯವಸ್ಥೆಯಲ್ಲಿ ಜಾರಿಗೆ ತಂದಿದ್ದೇ ಅವರು. ಕೈದಿಗಳೂ ಸಾಮಾನ್ಯ ಪ್ರಜೆಗಳಂತೆ ಮೂಲಭೂತ ಹಕ್ಕುಗಳನ್ನು ಚಲಾಯಿಸಬಹುದು ಎಂಬುದನ್ನು ಪ್ರತಿಪಾದಿಸಿದವರು ಜಸ್ಟೀಸ್ ಭಗವತಿ.
No comments:
Post a Comment