Tuesday, June 6, 2017

ಪ್ರಚಲಿತ ವಿದ್ಯಮಾನ : ಜೂನ್ 2017 : ಸೀಮೆಎಣ್ಣೆಗೆ ಸಬ್ಸಿಡಿ, ಅಟಲ್‌ ಪಿಂಚಣಿ ಯೋಜನೆಗೆ ಆಧಾರ್‌ ಕಡ್ಡಾಯ

ನವದೆಹಲಿ: ಸೀಮೆಎಣ್ಣೆ ಖರೀದಿಗೆ ಸಹಾಯಧನ ಹಾಗೂ ಅಟಲ್‌ ಪಿಂಚಣಿ ಯೋಜನೆಯ ಸೌಲಭ್ಯಗಳನ್ನು ಪಡೆಯಲು ಆಧಾರ್‌ ಕಾರ್ಡ್‌ ಕಡ್ಡಾಯಗೊಳಿಸಲಾಗಿದೆ.

ಸೀಮೆಎಣ್ಣೆ ಸಹಾಯಧನ ಪಡೆಯುತ್ತಿರುವವರು ಅಥವಾ ಅಟಲ್‌ ಪಿಂಚಣಿ ಯೋಜನೆ ಸೌಲಭ್ಯ ಹೊಂದಿರುವವರು ಆಧಾರ್‌ ಸಂಖ್ಯೆ ನೀಡಬೇಕು.

ಇಲ್ಲವಾದಲ್ಲಿ ಈ ಸೌಲಭ್ಯಗಳನ್ನು ಪಡೆಯುವುದನ್ನು ಮುಂದುವರಿಸಲು ಆಧಾರ್‌ ಸಂಖ್ಯೆ ಪಡೆಯಲು ನೋಂದಾಯಿಸಿಕೊಳ್ಳಬೇಕು ಎಂದು ಸರ್ಕಾರ ತನ್ನ ಆದೇಶದಲ್ಲಿ ಉಲ್ಲೇಖಿಸಿದೆ.

ಅಟಲ್‌ ಪಿಂಚಣಿ ಯೋಜನೆಗೆ ಹಾಗೂ ಸೀಮೆಎಣ್ಣೆ ಸಹಾಯಧನಕ್ಕೆ ಆಧಾರ್‌್ ನೀಡಲು ಕ್ರಮವಾಗಿ  ಜೂನ್‌ 15  ಹಾಗೂ ಸೆಪ್ಟೆಂಬರ್‌ 30 ಕೊನೆಯ ದಿನವಾಗಿದೆ.

ಆದರೆ ಆಧಾರ್‌ ಸಂಖ್ಯೆ ನೀಡುವ ತನಕ ಸೌಲಭ್ಯ ಪಡೆಯುವ ಸಲುವಾಗಿ ಪಡಿತರ ಚೀಟಿ, ಚಾಲನಾ ಪರವಾನಗಿ, ಮತದಾರರ ಗುರುತಿನ ಚೀಟಿ, ಭಾವಚಿತ್ರ ಇರುವ ಕಿಸಾನ್‌ ಪಾಸ್‌ಬುಕ್‌, ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ (ನರೇಗಾ) ನೀಡಲಾದ ಉದ್ಯೋಗ ಚೀಟಿ, ಗೆಜೆಟೆಡ್‌ ಅಧಿಕಾರಿ ಅಥವಾ  ತಹಶೀಲ್ದಾರ್‌ ನೀಡಿರುವ ಪ್ರಮಾಣಪತ್ರವನ್ನು ಗುರುತಿನ ಚೀಟಿ ಎಂದು ಪರಿಗಣಿಸಲಾಗುತ್ತದೆ.

ಸಹಾಯಧನ ವಿತರಿಸಲು ಪಡಿತರ ಚೀಟಿಯೊಂದಿಗೆ ಅಥವಾ ಬ್ಯಾಂಕ್‌್ ಖಾತೆ ಜತೆಗೆ ಆಧಾರ್‌ ಸಂಖ್ಯೆ ಜೋಡಣೆ ಮಾಡಲು ನಿರ್ಧರಿಸಲಾಗಿದೆ.

No comments:

Post a Comment

Kannada GK You Tube Channel

🎞 *ಕನ್ನಡ ಜ್ಞಾನ ಭಂಡಾರ - Kannada Jnana Bhandara* 🎥📚 YouTube Channel ಕನ್ನಡ ಸಾಮಾನ್ಯ ಜ್ಞಾನ ಮತ್ತು ಪ್ರಚಲಿತ ವಿದ್ಯಮಾನದ ವೀಡಿಯೋಗಳಿಗಾಗಿ ನಮ್ಮ ಯೂ ಟ್...