Tuesday, June 20, 2017

ಪ್ರಚಲಿತ ವಿದ್ಯಮಾನ : ಜೂನ್ 2017 : ರಾಮ್​ ನಾಥ್ ಕೋವಿಂದ್ ಎನ್​ಡಿಎ ರಾಷ್ಟ್ರಪತಿ ಅಭ್ಯರ್ಥಿ

ನವದೆಹಲಿ: ರಾಷ್ಟ್ರಪತಿ ಚುನಾವಣೆಗೆ ಎನ್​ಡಿಎ ಅಭ್ಯರ್ಥಿಯಾಗಿ ಬಿಹಾರ ರಾಜ್ಯಪಾಲರಾದ ರಾಮ್​ ನಾಥ್​ ಕೋವಿಂದ್​ ಅವರನ್ನು ಆಯ್ಕೆ ಮಾಡಲಾಗಿದೆ.

ಸೋಮವಾರ ನಡೆದ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಡೆದ ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ರಾಷ್ಟ್ರಪತಿ ಚುನಾವಣೆಗೆ ಎನ್​ಡಿಎ ಅಭ್ಯರ್ಥಿಯಾಗಿ ರಾಮ್​ ನಾಥ್​ ಕೋವಿಂದ್​ ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್​ ಷಾ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಸದ್ಯಕ್ಕೆ ರಾಷ್ಟ್ರಪತಿ ಅಭ್ಯರ್ಥಿ ಮಾತ್ರ ಆಯ್ಕೆ ಮಾಡಲಾಗಿದ್ದು, ಉಪರಾಷ್ಟ್ರಪತಿ ಅಭ್ಯರ್ಥಿ ಚರ್ಚೆ ಇನ್ನೂ ನಡೆದಿಲ್ಲವೆಂದು ಅಮಿತ್​ ಷಾ ಹೇಳಿದ್ದಾರೆ.

Congratulations to Shri Ramnath Kovind ji on being announced as the Presidential candidate of NDA (National Democratic Alliance).

— Amit Shah (@AmitShah) June 19, 2017

ಸೋಮವಾರ ನಡೆದ ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ಕೇಂದ್ರ ಸಚಿವರಾದ ರಾಜನಾಥ್​ ಸಿಂಗ್​, ಎಂ. ವೆಂಕಯ್ಯ ನಾಯ್ಡು, ಅರುಣ್​ ಜೇಟ್ಲಿ, ಸುಷ್ಮಾ ಸ್ವರಾಜ್​, ನಿತಿನ್​ ಗಡ್ಕರಿ, ಅನಂತ್​ ಕುಮಾರ್​ ಪಾಲ್ಗೊಂಡಿದ್ದರು.

ಎರಡು ಬಾರಿ ರಾಜ್ಯಸಭಾ ಸದಸ್ಯರಾಗಿದ್ದ ರಾಮನಾಥ್‌ ಕೋವಿಂದ (1994-2000 ಮತ್ತು 2000-2006)
ಬಿಜೆಪಿ ದಲಿತ ಮೋರ್ಚಾದ ಮಾಜಿ ಅಧ್ಯಕ್ಷ (1998 – 2002)
ಬಿಜೆಪಿಯ ರಾಷ್ಟ್ರೀಯ ಮಾಜಿ ವಕ್ತಾರ
ಅಖಿಲ ಭಾರತ ಕೋಲಿ ಸಮಾಜದ ಮಾಜಿ ಅಧ್ಯಕ್ಷ
ಪ್ರಸ್ತುತ ಬಿಹಾರದ ರಾಜ್ಯಪಾಲರಾಗಿರುವ ಕೋವಿಂದ
ಉತ್ತರ ಪ್ರದೇಶದ ಕಾನ್ಪುರ ದೆಹತ್​ ಜಿಲ್ಲೆಯ ದೇರಾಪುರ ತಾಲೂಕಿನ ಪರೌಂಖ್​ ಗ್ರಾಮದಲ್ಲಿ 1945 ಅಕ್ಟೋಬರ್​ 1 ರಂದು ಜನನ

ಬಿಜೆಪಿ ಹಿರಿಯ ನಾಯಕರಾದ ಎಲ್​.ಕೆ. ಅಡ್ವಾಣಿ ಮತ್ತು ಮುರಳಿ ಮನೋಹರ ಜೋಷಿ ಅವರಿಗೆ ರಾಮ್​ ನಾಥ್​ ಕೋವಿಂದ್​ ಅವರ ಆಯ್ಕೆಯ ಕುರಿತು ಕೇಂದ್ರ ಸಚಿವ ವೆಂಕಯ್ಯ ನಾಯ್ಡು ಮಾಹಿತಿ ನೀಡಿದ್ದರು.

ತೆಲಂಗಾಣ ಮುಖ್ಯಮಂತ್ರಿ ಮತ್ತು ಟಿಆರ್​ಎಸ್​ ಮುಖ್ಯಸ್ಥ ಕೆ. ಚಂದ್ರಶೇಖರ್​ ರಾವ್​ ಎನ್​ಡಿಎ ರಾಷ್ಟ್ರಪತಿ ಅಭ್ಯರ್ಥಿ ರಾಮ್​ನಾಥ್​ ಕೋವಿಂದ್​ ಅವರಿಗೆ ಬೆಂಬಲ ನೀಡುವುದಾಗಿ ಪ್ರಧಾನಿ ನರೇಂದ್ರ ಮೋದಿಗೆ ತಿಳಿಸಿದ್ದಾರೆ.

ರಾಮ್​ ನಾಥ್​ ಕೋವಿಂದ್​ ಅವರಿಗೆ ಬೆಂಬಲ ಪಡೆಯುವ ಸಂಬಂಧ ಬಿಹಾರ ಮುಖ್ಯಮಂತ್ರಿ ನಿತೀಶ್​ ಕುಮಾರ್​, ಆಂಧ್ರ ಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಮತ್ತು ತಮಿಳುನಾಡು ಸಿಎಂ ಇ ಪಳನಿಸ್ವಾಮಿ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಮಾತುಕತೆ ನಡೆಸಿದ್ದಾರೆ.

No comments:

Post a Comment

Kannada GK You Tube Channel

🎞 *ಕನ್ನಡ ಜ್ಞಾನ ಭಂಡಾರ - Kannada Jnana Bhandara* 🎥📚 YouTube Channel ಕನ್ನಡ ಸಾಮಾನ್ಯ ಜ್ಞಾನ ಮತ್ತು ಪ್ರಚಲಿತ ವಿದ್ಯಮಾನದ ವೀಡಿಯೋಗಳಿಗಾಗಿ ನಮ್ಮ ಯೂ ಟ್...